Wednesday, January 30, 2013

ಬೇಂದ್ರೆಯವರ ಜನುಮ ದಿನದ ಸ್ಮರಣಾರ್ಥ

ಮೂಡಲ ಮನೆಯ ಮುತ್ತಿನ ನೀರಿನ
ಎರಕಾವ ಹೊಯ್ದ, ನುಣ್ಣನೆ ಎರಕಾವ ಹೊಯ್ದ
ಬಾಗಿಲ ತೆರೆದು ಬೆಳಕು ಹರಿದು
ಜಗವೆಲ್ಲಾ ತೊಯ್ದ, ದೇವನು ಜಗವೆಲ್ಲ ತೊಯ್ದ
ಎಲೆಗಳ ಮೆಲೆ, ಹೂಗಳ ಒಳಗೆ
ಅಮೃತದಾ ಬಿಂದು, ಕಂಡವು ಅಮೃತದಾ ಬಿಂದು
ಯಾರಿರಿಸಿಹರು ಮುಗಿಲಿನ ಮೇಲಿಂದ
ಇಲ್ಲಿಗೆ ಇದ ತಂದು, ಈಗ ಇಲ್ಲಿಗೆ ಇದ ತಂದು
ಗಿಡಗಂಟೆಗಳ ಕೊರಳೊಳಗಿಂದ ಹಕ್ಕಿಗಳಾ ಹಾಡು
ಹೊರಟಿತು, ಹಕ್ಕಿಗಳಾ ಹಾಡು
ಗಂಧರ್ವರ ಸೀಮೆಯಾಯಿತು, ಕಾಡಿನಾ ನಾಡು
ಕ್ಷಣದೊಳು, ಕಾಡಿನಾ ನಾಡು 

No comments:

Post a Comment